ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂
ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಅನಂತ ಅನಂತ ವಂದನೆಗಳು. ಹುಟ್ಟುಹಬ್ಬದ ಪ್ರಯುಕ್ತ ಅನೇಕ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳಲ್ಲಿ ತಮ್ಮ ಕೈಲಾದ ಸೇವೆ ಮಾಡಿದ ಅಭಿಮಾನಿಗಳಿಗೆ ನನ್ನ ಅಭಿನಂದನೆಗಳು.
ಈ ನಿಮ್ಮ ಪ್ರೀತಿ-ಅಭಿಮಾನಕ್ಕೆ ಎಂದಿಗೂ ಬೆಲೆ ಕಟ್ಟಲಾಗುವುದಿಲ್ಲ. ಧನ್ಯೋಸ್ಮಿ ಕರ್ನಾಟಕ 🙏🏾
Our #DevilTheHero first look glimpse is out now 🙂 Hope it resounded well with everyone
https://youtu.be/TLxvZTmo7E4?si=WhKW2jREn6V_Mpjr
@vaishnostudiosofficial
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.
ತ್ರಿವಿಧ ದಾಸೋಹಿಗಳೆಂದೇ ಜನರ ಮನೆಮನಗಳಲ್ಲಿ ನೆಲೆಯಾಗಿರುವ ಆದಿಚುಂಚನಗಿರಿ ಮಠದ ಶ್ರೀ ಡಾ||ಬಾಲಗಂಗಾಧರನಾಥ ಸ್ವಾಮಿಗಳು ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಮಾಡಿದ್ದಾರೆ. ಇಂದು ಈ ಜಗದ್ಗುರುಗಳ ಪುಣ್ಯಸ್ಮರಣೆ 🙏
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
ಕಾಲಾಯ ತಸ್ಮಯ್ ನಮಃ